ಅಭಿಪ್ರಾಯ / ಸಲಹೆಗಳು

ಲಾಕ್ ಡೌನ್ ನಿಯಮ ಉಲ್ಲಂಘನೆ ಪ್ರಕರಣ ದಾಖಲು

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ  ನಾಪೋಕ್ಲು ನಗರದಲ್ಲಿರುವ  ಜುವೆಲ್ಲರಿ ಅಂಗಡಿಯನ್ನು ಅದರ ಮಾಲಿಕರಾದ ಆಶೀಕ್ ಸಿ. ರವರು ದಿನಾಂಕ 5-7-2021 ರಂದು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಜಿಲ್ಲಾಧಿಕಾರಿಯವರು ಹೊರಡಿಸಿದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ತಮ್ಮ ಜುವೆಲ್ಲರಿ ಅಂಗಡಿಯನ್ನು ತೆರೆದು ವಹಿವಾಟನ್ನು ನಡೆಸಿದ್ದು, ಈ ಸಂಬಂಧ  ವಾಟ್ಸ್ ಅಪ್  ಮಾದ್ಯಮದಲ್ಲಿ ಬಂದ ಮಾಹಿತಿಯನ್ನು ಆದರಿಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಲಾಗಿದೆ.

ಬೀಟಿ ಮರ ಕಳ್ಳತನ ಆರೋಪಿಗಳ ಬಂಧನ.
 
ಮಡಿಕೇರಿ ಗ್ರಾಮಾಂತರ ಠಾಣಾ ಸರದ್ದಿನ ಚೇರಳ ಶ್ರೀಮಂಗಲ ಗ್ರಾಮದ ಬಿ.ಎಂ.ಬೋಪಯ್ಯ ಎಂಬವರ ತೋಟದಿಂದ ದಿನಾಂಕ 6.11.2020ರ 5.00 ಪಿ.ಎಂ. ನಿಂದ 18.11.2020ರ 10.00 ಎ.ಎಂ. ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಬೀಟಿ ಮರವನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ದಿನಾಂಕ 20.4.2021 ರಂದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು.
 
ಪ್ರಕರಣದ ತನಿಖೆಯನ್ನು ಕೈಗೊಂಡ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕರಾದ ಎಸ್.ಎಸ್.ರವಿಕುಮಾರ್ ರವರು ಪೊಲೀಸ್ ವರಿಷ್ಠಾಧಿಕಾರಿಯವರ ಮತ್ತು ಮಡಿಕೇರಿ ಉಪ ವಿಭಾಗದ ಪ್ರಭಾರ ಡಿವೈ.ಎಸ್.ಪಿ ಹೆಚ್.ಎಂ.ಶೈಲೇಂದ್ರ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಯೊಂದಿಗೆ ಕಳ್ಳತನ ಅರೋಪಿಗಳನ್ನು ಪತ್ತೆಮಾಡಿ ಆರೋಪಿಗಳಾದ 1) ಇಬ್ರಾಹಿಂ, ಪ್ರಾಯ 27 ವರ್ಷ, ವಾಲ್ನೂರು ತ್ಯಾಗತ್ತೂರು ಗ್ರಾಮ, ಸೋಮವಾರಪೇಟೆ ತಾಲ್ಲೂಕು, 2) ಉಮ್ಮರ್ ಎಂ.ಕೆ. ತಂದೆ ಕುಂಜಾಲಿ, 33 ವರ್ಷ, ಸಿದ್ದಾಪುರ ಮತ್ತು 3) ವಾಸಿಮ ಅಕ್ರಮ್, ತಂದೆ ಸುಮಾಯಿಲ್, 25 ವರ್ಷ, ಮೈಸೂರು ನಗರ ಇವರನ್ನು ಬಂಧಿಸಿ ಆರೋಪಿಗಳು ಕಳವು ಮಾಡಿದ 1.5 ಲಕ್ಷ ರೂಪಾಯಿ ಮೌಲ್ಯದ ಬೀಟಿ ಮರದ ತುಂಡುಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುತ್ತಾರೆ.
ಈ ಕಾರ್ಯಾಚರಣೆಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯ ಪಿ.ಐ. ರವಿಕಿರಣ್ ಎಸ್.ಎಸ್ ಸಿಬ್ಬಂದಿಗಳಾದ ರವಿಕುಮಾರ್, ಮಹೇಶ್ ಎಂ.ಕೆ, ದಿನೇಶ್ ಕೆ.ಡಿ. ಡಿಸಿಐಬಿ ವಿಭಾಗದ ಯೋಗೇಶ್, ನಿರಂಜನ್, ಅನಿಲ್ ಕುಮಾರ್ ಮತ್ತು ಶರತ್ ರವರು ಭಾಗಿಯಾಗಿದ್ದು ಇವರ ಕಾರ್ಯವೈಖರಿಯನ್ನು ಶ್ಲಾಘಿಸಲಾಗಿದೆ.
 
 
 
 
 
 

ಇತ್ತೀಚಿನ ನವೀಕರಣ​ : 11-07-2021 12:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080