ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04-05-2021 ರಂದು ಸೋಮವಾರಪೇಟೆ ಪಟ್ಟಣದ ಎಂ.ಎಸ್.‌ ಐ.ಎಲ್‌ ಮದ್ಯ ಮಾರಾಟ ಮಳಿಗೆಯನ್ನು ಪ್ರವೀಣ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿದ ನಂತರ ಮದ್ಯದ ಅಂಗಡಿಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುತ್ತಿದ್ದ ಮೇರೆ ಪಂಚಾಯಿತಿ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಹಲ್ಲೆ ಪ್ರಕರಣ

                ದಿನಾಂಕ: 04-05-2021 ರಂದು ಸೋಮವಾರಪೇಟೆ ಪಟ್ಟಣದ ಕರ್ಕಳ್ಳಿ ನಿವಾಸಿ ಸುಂದರೇಶ ಎಂಬುವವರಿಗೆ ಪಕ್ಕದ ಮನೆಯ ವಾಸಿ ಮಂಜುನಾಥ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 04-05-2021 ರಂದು ಸೋಮವಾರಪೇಟೆ ತಾಲ್ಲೂಕು ನೇರುಗಳಲೆ  ಗ್ರಾಮದ  ನಿವಾಸಿ  ವಾಲ್ಟರ್‌ ಬುತೆಲ್ಲೋ ಎಂಬುವವರು  ಅವರ  ಅಂಗಡಿಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‍ಐ ಚಂದ್ರಶೇಖರ್  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04-05-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ ಮಧು ಎಂಬುವವರು ಅವರ ಬೈಕ್‌ ರಿಪೇರಿ ಮಳಿಗೆಯನ್ನು  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಮಾರ್ಗಸೂಚಿ ಉಲ್ಲಂಘಿಸಿ ಅಂಗಡಿ ತೆರೆದಿದ್ದು ಈ ಬಗ್ಗೆ ಕೂಡಿಗೆ ಗ್ರಾಮ ಪಂಚಾಯತ್‌ ಅಧಿಕಾರಿಗಳು ನೀಡಿದ  ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04-05-2021 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮಧು ಎಂಬುವವರು ಅವರ ವಿನಾಯಕ್‌ ಆಟೋ ವರ್ಕ್ಸ್‌ ಬೈಕ್‌ ರಿಪೇರಿ ಮಳಿಗೆಯನ್ನು  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಮಾರ್ಗಸೂಚಿ ಉಲ್ಲಂಘಿಸಿ ಅಂಗಡಿ ತೆರೆದಿದ್ದು ಈ ಬಗ್ಗೆ ಹೆಬ್ಬಾಲೆ  ಗ್ರಾಮ ಪಂಚಾಯತ್‌ ಅಧಿಕಾರಿಗಳು ನೀಡಿದ  ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 04-05-2021 ರಂದು ಸೋಮವಾರಪೇಟೆ ತಾಲ್ಲೂಕು ನಲ್ಲೂರು ಗ್ರಾಮದ  ನಿವಾಸಿ ಆನಂದ ಎಂಬುವವರಿಗೆ ಅದೇ ಗ್ರಾಮ ನಿವಾಸಿ ಪ್ರದೀಪ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 04-05-2021 ರಂದು ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ಗೋಳಿ ಕಟ್ಟೆ ನಿವಾಸಿ ನವೀನ್‌ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ದಿನಸಿ ಅಂಗಡಿ ಮತ್ತು ಕೋಳಿ ಮಾರಾಟ ಮಳಿಗೆಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮೇರೆ ಮದೆ ಪಂಚಾಯಿತಿ ಅಧಿಕಾರಿಗಳು  ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 05-05-2021 05:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080