ಅಭಿಪ್ರಾಯ / ಸಲಹೆಗಳು

ವಂಚನೆ ಪ್ರಕರಣ

          ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತಿತಿಮತಿ ದೇವಮಾಚ್ಚಿ ನಿವಾಸಿ ಹೆಚ್‍.ಡಿ ಲೋಕೇಶ ಎಂಬುವವರು 2014 ನೇ ಸಾಲಿನಿಂದ ಪಗ್ಮಿ ಸಂಗ್ರಹಗಾರರಾಗಿ ಕೆಲಸ ಮಾಡುತ್ತಿದ್ದು ಪ್ರತಿದಿನ ಸಂಘದ ಗ್ರಾಹಕರಿಂದ ಪಿಗ್ಮಿಹಣ ಹಾಗೂ ಸಾಲದ ಮರುಪಾವತಿ ಹಣ ಸಂಗ್ರಹಣೆ ಮಾಡುತ್ತಿದ್ದರು. ಕಳೆದ ಆರು ತಿಂಗಳಿನಿಂದ ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಸರಿಯಾಗಿ ಸಂಘಕ್ಕೆ ಪಾವತಿಸದೇ ಇದ್ದು ದಿನಾಂಕ: 27-10-2020 ರಿಂದ ಯಾವುದೇ ಮಾಹಿತಿ  ನೀಡದೇ ಪಿಗ್ಮಿ ಸಂಗಹಣೆಯನ್ನು ನಿಲ್ಲಿಸಿರುತ್ತಾರೆ. ಈ ಬಗ್ಗೆ ವಿಚಾರಿಸಿದಾಗ ಲೋಕೇಶ್‍ ರವರು ಗ್ರಾಹಕರಿಂದ ಸಂಗ್ರಹಿಸಿದ ಸುಮಾರು 7 ರಿಂದ 8 ಲಕ್ಷ ಹಣವನ್ನು ಸಂಘಕ್ಕೆ ಪಾವತಿಸದೇ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 18-02-2021 ರಂದು ಸಂಘದ ಮುಖ‍್ಯ ಕಾರ್ಯನಿರ್ವಹಣಾಧಿಕಾರಿಯವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವೃದ್ದರೊಬ್ಬರನ್ನು ಬೆದರಿಸಿ ಸುಲಿಗೆ.

          ದಿನಾಂಕ: 17-02-2021 ರಂದು ಪೊನ್ನಂಪೇಟೆ ತಾಲ್ಲೂಕು ಕುರ್ಚಿ ಗ್ರಾಮದ ನಿವಾಸಿ ತಿಮ್ಮಯ್ಯ ಎಂಬುವವರು ಮನೆಯಲ್ಲಿರುವಾಗಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ ಮನೆಯಲ್ಲಿದ್ದ ಕಪಾಟುಗಳ ಬಾಗಿಲನ್ನು ತೆಗೆಸಿ ಅದರಲ್ಲಿದ್ದ ಅಂದಾಜು  ₹. 20,000 ನಗದು, ₹. ಮೌಲ್ಯದ ಚಿನ್ನಾಭರಣ, ₹. ಬೆಲೆಬಾಳುವ 1 ಮೊಬೈಲ್‍ ಪೋನ್‍ ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 18-02-2021 ರಂದು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ     

     ದಿನಾಂಕ: 17-02-2021 ರಂದು ಕುಶಾಲನಗರ ಪಟ್ಟಣದ ನಂಜುಂಡೇಶ್ವರ ಬಡಾವಣೆ ನಿವಾಸಿ ನಿತಿನ್ ಎಂಬುವವರ ಮನೆಯ ಕಿಟಕಿಯನ್ನು ಯಾರೋ ಕಳ್ಳರು ಒಡೆದು ಒಳನುಗ್ಗಿ ನಗದು, ಚಿನ್ನಾಭಣರಣ, ಲ್ಯಾಪ್ ಟಾಪ್‍ ಸಹಿತ ಒಟ್ಟು ₹. 1,50,000 ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 17-02-2021 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ದೊಡ್ಡ ಬಿಳಹ ಗ್ರಾಮದ ನಿವಾಸಿ ಮಹಿಳೆಯೊಬ್ಬರ ಮನೆಗೆ ಅದೇ ಗ್ರಾಮದ ನಿವಾಸಿಗಳಾದ ಪವನ್‍ ಕುಮಾರ್‍ ಮತ್ತು ದಿನೇಶ್‍ ಎಂಬುವವರು ಹೋಗಿ ಹಣದ ವಿಚಾರದಲ್ಲಿ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಚಾಕುವಿನಿಂದ ಹಲ್ಲೆ ಮಾಡಿ ಗಾಯಪಡಿಸಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 19-02-2021 01:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080