ಅಭಿಪ್ರಾಯ / ಸಲಹೆಗಳು

ಕೋವಿಡ್‍ ನಿಯಮ ಉಲ್ಲಂಘನೆ ಪ್ರಕರಣ.

            ದಿನಾಂಕ: 25-08-2021 ರಂದು ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಪ್ರವಾಸೋದ್ಯಮ ಅವಲಂಭಿತರ ಒಕ್ಕೂಟದ ಅಧ್ಯಕ್ಷರಾದ ಕೆ.ಕೆ ಮಂಜುನಾಥ್‌ ಎಂಬುವವರು ನೇತೃತ್ವದಲ್ಲಿ 125 ರಿಂದ 150 ಜನರ ಗುಂಪು ಸೇರಿಸಿಕೊಂಡು ಸರ್ಕಾರ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂ ವಿರೋಧಿಸಿ ಪ್ರತಿಭಟನೆ ನಡೆಸಿದ್ದು, ಇದು ಕೋವಿಡ್‍-19 ಸಂಬಂಧ ನೀಡಲಾಗಿರುವ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಯಾವುಇದೇ ಅನುಮತಿ ಪಡೆಯದೇ ಪ್ರತಿಭಟನೆ ಮಾಡಿರುವ ಬಗ್ಗೆ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 25-08-2021 ರಂದು ಪೊನ್ನಂಪೇಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಕೆಎ-03-ಎನ್‌ಇ-9889 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಲ್-8857‌ ರಸ್ಕೂಟರ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ 23-08-2021 ರಿಂದ 25-08-2021 ರ ನಡುವಿನ ದಿನಗಳಲ್ಲಿ ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ನಿವಾಸಿ ರಾಜು ಎಂಬುವವರ ಮನೆಯ ಮೇಲ್ಚಾವಣಿಯನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಮನೆಯೊಳಗೆ ಗಾಡ್ರೆಜ್‌ ಬೀರುವನಲ್ಲಿಟ್ಟಿದ್ದ ₹. ೩,78,000 ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಬೈಕ್‌ ಕಳವು ಪ್ರಕರಣ

            ದಿನಾಂಕ: 21-08-2021 ರಂದು ವಿರಾಜಪೇಟೆ ತಾಲ್ಲೂಕು ಕಣ್ಣಂಗಾಲ ಒಂಟಿಅಂಗಡಿ ಗ್ರಾಮದ ನಿವಾಸಿ ಹರೀಶ್‌ ಎಂಬುವವರು ಮನೆಯ ಹಿಂಭಾಗದಲ್ಲಿ ಕೆಎ-09-ಎಚ್‌ವೈ-1447 ರ ಬೈಕನ್ನು ನಿಲ್ಲಿಸಿ ಮೈಸೂರಿನಲ್ಲಿರುವ ಮಗಳಮನೆಗೆ ಹೋಗಿ ವಾಪಾಸ್ಸು ದಿನಾಂಕ: 24-08-2021 ರಂದು ನೋಡಿದಾಗ ಯಾರೋ ಕಳ್ಳರು ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 26-08-2021 04:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080