ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ; 29-06-2021 ರಂದು ಮಡಿಕೇರಿ – ಕುಶಾಲನಗರ ಹೆದ್ದಾರಿ ರಸ್ತೆಯಲ್ಲಿ ಬಸವನಹಳ್ಳಿ ಗ್ರಾಮದ ಬಳಿ ಕೆಎ-12-ಕ್ಯೂ-5167 ರ ಸ್ಕೂಟರನ್ನು ಅದರ ಸವಾರ ಯಶವಂತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಪುಟ್ಟ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದೂ ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 29-06-2021 ರಂದು ಸೋಮವಾರಪೇಟೆ ತಾಲ್ಲೂಕು ಗುಮ್ಮನಕೊಲ್ಲಿ ಗ್ರಾಮದ ನಿವಾಸಿ  ಹರೀಂದ್ರನ್  ಎಂಬುವವರು ಅವರ ಹೊಟೇಲ್‌ ನ ಹೊರಭಾಗದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ  ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 29-06-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಕಸ್ನಿ ಹೊಟೇಲ್‌ ಮಾಲೀಕರಾದ ಸಹದೇವನ್‌ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಹೊಟೇಲ್‌ ತೆರೆದು  ಸಾರ್ವಜನಿಕರು ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕುಳಿತು ಊಟ ಸೇವಿಸಲು ಅವಕಾಶ ಮಾಡಿದ್ದು ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 29-06-2021 ರಂದು ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ನಗರದಲ್ಲಿರುವ ಫುಡ್‌ಲ್ಯಾಂಡ್‌ ಹೊಟೇಲ್‌ ಮಾಲೀಕರಾದ ಅಬ್ದುಲ್‌ ಜಬ್ಬರ್ ಎಂಬುವವರು  ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಹೊಟೇಲ್‌ ತೆರೆದು  ಸಾರ್ವಜನಿಕರು ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕುಳಿತು ಊಟ ಸೇವಿಸಲು ಅವಕಾಶ ಮಾಡಿದ್ದು ಈ ಬಗ್ಗೆ ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಅಕ್ರಮ ಜೂಜಾಟ ಪ್ರಕರಣ

      ದಿನಾಂಕ: 29-06-2021 ರಂದು ಸೋಮವಾರಪೇಟೆ ತಾಲ್ಲೂಕು  ಶಿರಂಗಾಲ ಗ್ರಾಮದ ಪೆಟ್ರೋಲ್‌ ಬಂಕ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

      ದಿನಾಂಕ: 29-06-2021 ರಂದು ಸೋಮವಾರಪೇಟೆ ಪಟ್ಟಣದ ಆನೆಕೆರೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-06-2021 06:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080