ಅಭಿಪ್ರಾಯ / ಸಲಹೆಗಳು

ಅಕ್ರಮ ಲಾಟರಿ ಮಾರಾಟ

ದಿನಾಂಕ 02/12/2020ರಂದು ಕುಟ್ಟ ವೃತ್ತ ನಿರೀಕ್ಷಕರಾದ ಪರಶಿವಮೂರ್ತಿರವರು ಸಿಬ್ಬಂದಿಗಳೊಂದಿಗೆ ಕುಟ್ಟ ಪಟ್ಟಣದ ಅಂಗಡಿಯೊಂದರಲ್ಲಿ ಕೇರಳದ ಕಾಟಿಕುಳಂ ನಿವಾಸಿ ಸುರೇಶ ಎಂಬವರು ಕರ್ನಾಟಕದಲ್ಲಿ ನಿಷೇಧಿತವಾಗಿರುವ ಲಾಟರಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಸುಮಾರು 60 ಲಾಟರಿ ಟಿಕೆಟುಗಳು ಮತ್ತು ರೂ.1200/- ನಗದನ್ನು ವಶಪಡಿಸಿಕೊಂಡು ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ದಿನಾಂಕ 01/12/2020ರಂದು ವಿರಾಜಪೇಟೆ ಬಳಿಯ ಪೊದಕೋಟೆ ನಿವಾಸಿ ವಿ.ವಿ.ಅಣ್ಣಯ್ಯ ಎಂಬವರು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತರಾಗಿದ್ದು ಮೃತ ಅಣ್ಣಯ್ಯ ವಿವಿಧ ಸಂಘ ಸಂಸ್ಥೆಗಳಿಂದ ಸಾಲ ಪಡೆದಿದ್ದು ಸಾಲ ಮರು ಪಾವತಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಪಘಾತ ಗಾಯಾಳು ಸಾವು

ದಿನಾಂಕ 30/11/2020ರಂದು ಮಡಿಕೇರಿ ಬಳಿಯ ಕಾಟಕೇರಿ ಗ್ರಾಮದಲ್ಲಿ ಸಂಭವಿಸಿದ್ದ ಬೈಕ್‌ ಅವಘಢದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಸರಗೋಡಿನ ಅಮಿತಾ ಶೆಟ್ಟಿ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 02/12/2020ರಂದು ಮೃತರಾಗಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಬ್ಯಾಂಕ್‌ ಖಾತೆಯಿಂದ ಹಣ ವಂಚನೆ

ಕುಶಾಲನಗರದ ನೆಹರು ಬಡಾವಣೆ ನಿವಾಸಿ ಸ್ಟೆಲ್ಲಾ ಎಂಬವರ ಬ್ಯಾಂಕ್‌ ಖಾತೆಯಿಂದ ದಿನಾಂಕ 08/11/2020 ಮತ್ತು 01/12/2020ರಂದು ಸ್ಟೆಲ್ಲಾರವರ ಅರಿವಿಗೆ ಬಾರದಂತೆ ರೂ.80,000/- ಹಣವನ್ನು ಯಾರೋ ಅಪರಿಚಿತರು ಅವರ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಸಿಇಎನ್‌ ವಿಶೇಷ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಗುಂಡೇಟು, ವ್ಯಕ್ತಿಗೆ ಗಾಯ

ದಿನಾಂಕ 29/11/2020ರಂದು ಸಂಜೆ ವೇಳೆ ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಶಶಿ ಎಂಬವರ ತೋಟದಲ್ಲಿ ಗುಡ್ಡೆಹೊಸೂರಿನ ಸುನಿಲ್‌ ಎಂಬವರು ಬಗ್ಗಿಕೊಂಡು ಹಂದಿಯನ್ನು ಕಟ್ಟುತ್ತಿರುವಾಗ ಅನಿಲ್‌ ಎಂಬವರು ಸುನಿಲ್‌ರವರನ್ನು ನೋಡದೆ ಹಂದಿಗೆ ಗುಂಡು ಹೊಡೆದಿದ್ದು ಗುಂಡು ಸುನಿಲ್‌ರವರ ಕೈ ಮತ್ತು ಕಾಲಿಗೆ ತಗುಲಿ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 03-12-2020 11:15 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080