ಅಭಿಪ್ರಾಯ / ಸಲಹೆಗಳು

ತಂದೆಯಿಂದಲೇ ಮಗನ ಹತ್ಯೆ.

ದಿನಾಂಕ:01/02/2021 ರಂದು ಸಂಭವಿಸಿದ್ದ ಶನಿವಾರಸಂತೆಯ ನಿವಾಸಿ ಮಹೇಂದ್ರ ಕುಮಾರ್ ರವರ ಮಗ ಏಕಾಂತಚಾರಿಯ ಸಾವಿನ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿದ್ದಾರೆ,

       ದಿನಾಂಕ:01/02/2021 ರಂದು ಶನಿವಾರಸಂತೆಯ ನಿವಾಸಿ ಮಹೇಂದ್ರ ಕುಮಾರ್ ರವರು ನೀಡಿದ ದೂರಿನಲ್ಲಿ ತನ್ನ ಮಗ ಏಕಾಂತಚಾರಿಯು ತೋಟದಲ್ಲಿ ಮರದಿಂದ ಜಾರಿ ಬಿದ್ದು ಮೃತಪಟ್ಟಿರುವುದಾಗಿ ಈ ಸಂಬಂಧ ಮೃತ ದೇಹದ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಿನಾಂಕ:01/02/2021 ರಂದು ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದ್ದು ಶವ ಪರೀಕ್ಷಾ ವೇಳೆಯಲ್ಲಿ ಮೃತನ ದೇಹದಲ್ಲಿ ಹೊಡೆದಾಗ ಆದಂತಹ ಕಂದಿದ ಗುರುತುಗಳು ಕಂಡು ಬಂದಿದ್ದರಿಂದ ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತೀವ್ರತರ ತನಿಖೆಯನ್ನು ಕೈಗೊಂಡಿದ್ದು ಮೃತ ಏಕಾಂತಚಾರಿಯ ತಂದೆಯೆ ಮಗನನ್ನು ಆತನ ಜಮೀನಿಗೆ ಕರೆದುಕೊಂಡು ಹೋಗಿ ಹೊಡೆದು ಕೊಲೆ ಮಾಡಿರುವುದು ತಿಳಿದು ಬಂದ ಮೇರೆಗೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ,

ದಸ್ತಗಿರಿಯಾದ ಆರೋಪಿ ವಿವರ:- ಮಹೇಂದ್ರ ಕುಮಾರ್ ಬಿ.ಬಿ., ತಂದೆ ಪೌತಿ ಭೈರಾಚಾರ್ ಪ್ರಾಯ:52 ವರ್ಷ ಕೆ.ಎಸ್.ಆರ್.ಟಿ.ಸಿ.ನಿವರ್ಾಹಕ ಮಡಿಕೇರಿ ಡಿಪೋ, ವಾಸ: ಬೈಪಾಸ್ ರಸ್ತೆ ಶನಿವಾರಸಂತೆ ಸೋಮವಾರಪೇಟೆ ತಾಲ್ಲೂಕು ಕೊಡಗು ಜಿಲ್ಲೆ.

     ಪ್ರಕರಣವನ್ನು ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ನೇತೃತ್ವದಲ್ಲಿ ಸೋಮವಾರಪೇಟೆ ವೃತ್ತ ನಿರೀಕ್ಷಕರಾದ ಮಹೇಶ್ ಬಿ.ಜಿ., ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಯ ಪಿ.ಎಸ್.ಐ.ಹೆಚ್.ಈ.ದೇವರಾಜು, ಮತ್ತು ವೃತ್ತ ವ್ಯಾಪ್ತಿಯ ಸಿಬ್ಬಂದಿಗಳಾದ  ಲೋಕೇಶ್, ಅನಂತ್ ಕುಮಾರ್, ಮುರಳಿ, ಪ್ರದೀಪ್ ಕುಮಾರ್, ಹರೀಶ್, ಉಪ ವಿಭಾಗದ ಕ್ರೈಂ ಸಿಬ್ಬಂದಿ ದಯಾನಂದ್, ಹಾಗೂ ಸಿಡಿಆರ್ ಘಟಕದ ಗಿರೀಶ್ ಹಾಗೂ ರಾಜೇಶ್ ರವರು ಪತ್ತೆಹಚ್ಚಿರುತ್ತಾರೆ, ಇವರ ಕಾರ್ಯ ವೈಖರಿಯನ್ನು ಶ್ಲಾಘಿಸಲಾಗಿದೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 10-02-2021 ರಂದು ವಿರಾಜಪೇಟೆ ತಾಲ್ಲೂಕು ಇಮಜಿಲಗೇರಿ, ಪುಲಿಯೇರಿ ಗ್ರಾಮದ ಬಳಿ ಸಾರ್ವಜನಿಕ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಸಿದ್ದಾಪುರ ಠಾಣೆ ಪಿಎಸ್‍ಐ ಮೋಹನ್‍ ರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 09-02-2021 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು  ಗ್ರಾಮದ  ಕೊಟ್ಟೋಚಿ ನಿವಾಸಿ ಸುಗುಣ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾತರ ಠಾಣೆ ಪಿಎಸ್‍ಐ ಸಿದ್ದಲಿಂಗ ಬಾನಸೆ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 11-02-2021 05:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080