ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 22/10/2021ರಂದು ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದ ನಿವಾಸಿ ಬೀನಾ ಎಂಬವರೊಂದಿಗೆ ಅವರ ಪತಿ ವರ್ಗೀಸ್‌ ಎಂಬವರು ಮದ್ಯಪಾನ ಮಾಡಲು ಹಣ ಕೇಳಿ ಜಗಳವಾಡಿ ಕಬ್ಬಿಣದ ರಾಡಿನಿಂದ ಬೀನಾರವರಿಗೆ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಕೊಡಗು ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಅಕ್ರಮ ಗೋಸಾಗಾಟ

ದಿನಾಂಕ 23/10/2021ರಂದು ರಾತ್ರಿ ವೇಳೆ ಬೆಸಗೂರು ಗ್ರಾಮದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದಾರೆಂದು ದೊರೆತ ಸುಳಿವಿನ ಮೇರೆಗೆ ಗೋಣಿಕೊಪ್ಪ ವೃತ್ತ ನಿರೀಕ್ಷಕ ಜಯರಾಮುರವರು ಸ್ಥಳಕ್ಕೆ ತೆರಳಿ ಮೂರು ಜಾನುವಾರುಗಳನ್ನು ರಕ್ಷಿಸಿ ಒಂದು ಪಿಕ್‌ಅಪ್‌ ವಾಹನ ಮತ್ತು ಒಂದು ಓಮಿನಿ ವ್ಯಾನನ್ನು ವಶಪಡಿಸಿಕೊಂಡು ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕಳವು ಪ್ರಕರಣ

ದಿನಾಂಕ 22/10/2021ರ ರಾತ್ರಿ ವೇಳೆ ಯಾರೋ ಕಳ್ಳರು ವಿರಾಜಪೇಟೆ ಪಟ್ಟಣದ ನೆಹರು ನಗರದಲ್ಲಿರುವ ನೂರುಲ್‌ ಇಸ್ಲಾಂ ಮಸೀದಿಯ ಹೊರಭಾಗದಲ್ಲಿದ್ದ ಭಂಡಾರ ಡಬ್ಬಿಯ ಬೀಗವನ್ನು ಒಡೆದು ಅದರಲ್ಲಿದ್ದ ಸುಮಾರು ರೂ. 10,000/- ದಷ್ಟು ಹಣವನ್ನು ಕಳವು ಮಾಡಿರುವುದಾಗಿ ಸಿಯಾಬ್‌ ಎಂಬವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ವಿರಾಜಪೇಟೆ ತಾಲೂಕಿನ ಕಡಂಗದ ಅಂಚೆ ಕಚೇರಿಯಲ್ಲಿ ಶಾಖಾ ಅಂಚೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಕಿಲ್ಲರಹಟ್ಟಿಯ ವಿಜಯಕುಮಾರ್‌ ಎಂಬವರು ದಿನಾಂಕ 21/10/2021ರಿಂದ ಕರ್ತವ್ಯಕ್ಕೆ ಹಾಜರಾಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 24-10-2021 11:39 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080