ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ 25-12-2021 ರಂದು ಕುಶಾಲನಗರದ ಕೊಪ್ಪ ಸೇತುವೆ ಬಳಿ ಕೆಎ-09-ಡಿ-0257 ರ ಕಾರನ್ನು ಅದರ ಚಾಲಕ ರಾಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-19-ಇಎಲ್-8163 ರ ಬೈಕ್‌ ಮತ್ತು ಕೆಎ-12-ಆರ್-‌6797 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಮೂವರು ಬೈಕ್‌ ಸವಾರರು ಗಾಯಗೊಂಡಿದ್ದು ಈ ಬಗ್ಗೆ  ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ 25-12-2021 ರಂದು ಕುಶಾಲನಗರದ ಸೋಮೇಶ್ವರ ದೇವಸ್ಥಾನ ಬಳಿ ಮುಖ್ಯರಸ್ತೆಯಲ್ಲಿ ಕೆಎ-45-ಡಬ್ಲ್ಯೂ-3911 ರ ಬೈಕನ್ನು ಅದರ ಸವಾರ ರಂಜಿತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ರಸ್ತೆ ಬದಿಯಲ್ಲಿ ನಡೆದಕೊಂಡು ಹೋಗುತ್ತಿದ್ದ ಜಗದೀಶ್‌ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 25-12-2021 ರಂದು ಪೊನ್ನಂಪೇಟೆ ತಾಲ್ಲೂಕು ಕೊಟ್ಟಕೇರಿ ಗ್ರಾಮದ ನಿವಾಸಿಗಳಾದ ರಾಜಮಣಿ, ಬೆಳ್ಳಿಯಪ್ಪ, ಸೋಮಣ್ಣ, ಗಣೇಶ್ ಮತ್ತು ಇತರರು ಹಾಗೂ ಅಯ್ಯಪ್ಪ, ಕಿರಣ್‌‌ ಎಂಬುವವರು ಹಳೆ ವೈಷಮ್ಯದಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-12-2021 12:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080